Friday, September 5, 2008

ಬೆಣ್ಣೆ ಕದ್ದ ನಮ್ಮ ಕೃಷ್ಣ ..

ಬೆಣ್ಣೆ ಕದ್ದ ನಮ್ಮ ಕೃಷ್ಣಾ ಬೆಣ್ಣೆ ಕದ್ದನಮ್ಮ
ಬೆಣ್ಣೆಯ ಕದ್ದು ಜಾರುತ ಬಿದ್ದು ಮೊಳಕಾಲೂದಿಸಿಕೊಂಡನಮ್ಮ
ಬಿಂದಿಗೆ ಬಿದ್ದು ಸಿಡಿಯಲು ಸದ್ದು ಬೆಚ್ಚಿದ ರಾಧೆಯ ಗಂಡನಮ್ಮ
ತಾಯಿ ಬಂದಳೋಡಿ , ಕಳ್ಳನ ಕಣ್ಣಿನಲ್ಲಿ ಕೋಡಿ
ಕಣ್ಣಲಿ ಆಕೆ ಸಿಟ್ಟನು ತಾಳಿ ಸೊಂಟಕೆ ಕೈಯಿಟ್ಟು
ಆದಳು ಅರೆಚಣ ಭೀಕರ ತಾಳಿ ದುರುದುರು ಕಣ್ಣಿಟ್ಟು
ಹಣೆ ತುಂಬ ಕೆನ್ನೆಗೆ ಬೆಣ್ಣೆ ಮೆತ್ತಿದ ಒರಟನ ನೋಟಕ್ಕೆ
ಇಳಿಯಿತು ಕೋಪ ಅರಳಿತು ಕೆಂದುಟಿ ತುಂಟನ ನೋಟಕ್ಕೆ
ತಪ್ಪಿದ ದಂಟಕೆ ನಿಟ್ಟುಸಿರೆಳೆದ ಬೆಣ್ಣೆಗಳಾ ನೀಲಾ
ತಟ್ಟನೆ ಅಳುವುದ ನಿಲ್ಲಿಸಿ ಬಾಯಗಲಿಸಿ ಬಾಲ
ಹರಡಿದ ಬೆಳದಿಂಗಳ ಜಾಲ ಅರಳಿದ ಬೆಳದಿಂಗಳ ಲಾಲ
ಅವನ ಆ ಕುಟಿಲ ಬೆಣ್ಣೆಯಂಥ ನಗು ಕಾಯಲಿ ಜಗದವರಾ
ಸಂತತ ನಗಿಸಲಿ ನಗದವರ
(ಕವಿ : ಕೆ. ಎಸ್ .ನಿಸಾರ್ ಅಹಮದ್ )
***

No comments: