ನೇಗಿಲ ಹಿಡಿದಾ ಹೊಲದೊಳು ಹಾಡುತ
ಉಳುವಾ ಯೋಗಿಯ ನೋಡಲ್ಲಿ.
ಫಲವನು ಬಯಸದ ಸೇವೆಯೆ ಪೂಜೆಯು
ಕರ್ಮವೆ ಇಹಪರ ಸಾಧನವು.
ಕಷ್ಟದೊಳನ್ನವ ದುಡಿವನೆ ತ್ಯಾಗಿ
ಸೃಷ್ಟಿನಿಯಮದೊಳಗವನೇ ಭೋಗಿ.
ಲೋಕದೊಳೇನೇ ನಡೆಯುತಲಿರಲಿ
ತನ್ನೀ ಕಾರ್ಯವ ಬಿಡನೆಂದೂ:
ರಾಜ್ಯಗಳುದಿಸಲಿ ರಾಜ್ಯಗಳಳಿಯಲಿ,
ಹಾರಲಿ ಗದ್ದುಗೆ ಮಕುಟಗಳು,
ಮುತ್ತಿಗೆ ಹಾಕಲಿ ಸೈನಿಕರೆಲ್ಲ,
ಬಿತ್ತುಳುವುದನವ ಬಿಡುವುದೆ ಇಲ್ಲ.
ಬಾಳಿತು ನಮ್ಮೀ ನಾಗರಿಕತೆ ಸಿರಿ
ಮಣ್ಣುಣಿ ನೇಗಿಲಿನಾಶ್ರಯದಿ;
ನೇಗಿಲ ಹಿಡಿದಾ ಕೈಯಾಧಾರದಿ
ದೊರೆಗಳು ದರ್ಪದೊಳಾಳಿದರು.
ನೇಗಿಲ ಬಲದೊಳು ವೀರರು ಮೆರೆದರು,
ಶಿಲ್ಪಿಗಳೆಸೆದರು, ಕವಿಗಳು ಬರೆದರು.
ಯಾರೂ ಅರಿಯದ ನೇಗಿಲ ಯೋಗಿಯೆ
ಲೋಕಕೆ ಅನ್ನವನೀಯುವನು.
ಹೆಸರು ಬಯಸದೆ ಅತಿಸುಖಕೆಳಸದೆ
ದುಡಿವನು ಗೌರವಕಾಶಿಸದೆ.
ನೇಗಿಲಕುಲದೊಳಗಡಗಿದೆ ಕರ್ಮ;
ಉಳುವಾ ಯೋಗಿಯ ನೋಡಲ್ಲಿ.
ಫಲವನು ಬಯಸದ ಸೇವೆಯೆ ಪೂಜೆಯು
ಕರ್ಮವೆ ಇಹಪರ ಸಾಧನವು.
ಕಷ್ಟದೊಳನ್ನವ ದುಡಿವನೆ ತ್ಯಾಗಿ
ಸೃಷ್ಟಿನಿಯಮದೊಳಗವನೇ ಭೋಗಿ.
ಲೋಕದೊಳೇನೇ ನಡೆಯುತಲಿರಲಿ
ತನ್ನೀ ಕಾರ್ಯವ ಬಿಡನೆಂದೂ:
ರಾಜ್ಯಗಳುದಿಸಲಿ ರಾಜ್ಯಗಳಳಿಯಲಿ,
ಹಾರಲಿ ಗದ್ದುಗೆ ಮಕುಟಗಳು,
ಮುತ್ತಿಗೆ ಹಾಕಲಿ ಸೈನಿಕರೆಲ್ಲ,
ಬಿತ್ತುಳುವುದನವ ಬಿಡುವುದೆ ಇಲ್ಲ.
ಬಾಳಿತು ನಮ್ಮೀ ನಾಗರಿಕತೆ ಸಿರಿ
ಮಣ್ಣುಣಿ ನೇಗಿಲಿನಾಶ್ರಯದಿ;
ನೇಗಿಲ ಹಿಡಿದಾ ಕೈಯಾಧಾರದಿ
ದೊರೆಗಳು ದರ್ಪದೊಳಾಳಿದರು.
ನೇಗಿಲ ಬಲದೊಳು ವೀರರು ಮೆರೆದರು,
ಶಿಲ್ಪಿಗಳೆಸೆದರು, ಕವಿಗಳು ಬರೆದರು.
ಯಾರೂ ಅರಿಯದ ನೇಗಿಲ ಯೋಗಿಯೆ
ಲೋಕಕೆ ಅನ್ನವನೀಯುವನು.
ಹೆಸರು ಬಯಸದೆ ಅತಿಸುಖಕೆಳಸದೆ
ದುಡಿವನು ಗೌರವಕಾಶಿಸದೆ.
ನೇಗಿಲಕುಲದೊಳಗಡಗಿದೆ ಕರ್ಮ;
ನೇಗಿಲ ಬಲವೇ ನಮ್ಮಯ ಧರ್ಮ
1 comment:
ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ
Post a Comment